ಉಡುಪಿ: ನಾರ್ತ್ ಶಾಲಾ ಹಳೆ ವಿದ್ಯಾರ್ಥಿ ಮತ್ತು ಶಾಲಾಭಿವೃದ್ಧಿ ಸಮಿತಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಉಡುಪಿ ಹಾಗೂ ತೆಂಕಪೇಟೆ ಮಹಾಶಕ್ತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಶಾಸಕ ಕೆ. ರಘುಪತಿ ಭಟ್ ಶಿಬಿರದಲ್ಲಿ ಭೇಟಿ ನೀಡಿದರು. ಶಿಬಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು, ಕಣ್ಣಿನ ತಪಾಸಣೆ ಮಾಡಿಕೊಂಡರು.