News Karnataka Kannada
Tuesday, May 07 2024
ಉಡುಪಿ

ಉಡುಪಿ: ಉಚಿತ ಮಾನಸಿಕ ಆರೋಗ್ಯ ಚಿಕಿತ್ಸಾ ಕೇಂದ್ರ ಉದ್ಘಾಟನೆ

Udupi (1)
Photo Credit : News Kannada

ಉಡುಪಿ: ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಹಾಗೂ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರ ಜಂಟಿ ಆಶ್ರಯದಲ್ಲಿ ಪಿ. ಮೀನಾಕ್ಷಿ ವರದರಾಯ ಭಂಡಾರಿ ಅವರ ಸ್ಮರಣಾರ್ಥ ಉಚಿತ ಮಾನಸಿಕ ಆರೋಗ್ಯ ಚಿಕಿತ್ಸಾ ಕೇಂದ್ರದ ಉದ್ಘಾಟನೆ ಉಡುಪಿಯ ಸದಾನಂದ ಟವರ್ ನ ಮಾನಸ ಕ್ಲಿನಿಕ್ ನಲ್ಲಿ ಇಂದು ನಡೆಯಿತು.

ಕೇಂದ್ರವನ್ನು ಉದ್ಘಾಟಿಸಿದ ಗ್ರಾಹಕ ವೇದಿಕೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನ್ ಭಾಗ್ ಮಾತನಾಡಿ, ಪಿ. ಮೀನಾಕ್ಷಿ ವರದರಾಯ ಭಂಡಾರಿಯವರು ಸಾಮಾಜಿಕ ಕಳಕಳಿ ಇದ್ದ ವ್ಯಕ್ತಿಯಾಗಿದ್ದರು. ಅವರ ನೆನಪಿನಲ್ಲಿ ಉಚಿತ ಚಿಕಿತ್ಸೆ ನೀಡುತ್ತಿರುವುದು ಉತ್ತಮ ಕಾರ್ಯ ಎಂದರು.

ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಅರ್ಹ ಬಡವರು ಮಾನಸಿಕ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಉಚಿತ ಕ್ಲಿನಿಕ್ ತೆರೆಯಲಾಗಿದೆ ಎಂದು ತಿಳಿಸಿದರು.

ಲೆಕ್ಕ ಪರಿಶೋಧಕರಾದ ಅನಂತನಾರಾಯಣ ಪೈ ಅತಿಥಿಯಾಗಿ ಭಾಗವಹಿಸಿದ್ದರು. ವಿಶಾಲಾಕ್ಷಿ ರಾವ್, ಡಾ. ಸುಲತಾ ವಿ.ಭಂಡಾರಿ, ಡಾ.ವಿರೂಪಾಕ್ಷ ದೇವರಮನೆ, ಸೌಜನ್ಯಾ ಶೆಟ್ಟಿ, ಕರುಣಾಕರ್ ಶೆಟ್ಟಿ , ಡಾ.ಮಾನಸ್ , ಡಾ.ದೀಪಕ್ ಮಲ್ಯ , ನಾಗರಾಜ್‌ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಬೆಳಿಗ್ಗೆ 8 ರಿಂದ ರಾತ್ರಿ 8ರ ವರೆಗೆ ಡಾ. ಪಿ.ವಿ.ಭಂಡಾರಿ ಉಚಿತ ಸಂದರ್ಶನಕ್ಕೆ ಲಭ್ಯವಿರುತ್ತಾರೆ. ಅವಶ್ಯಕತೆ ಇರುವವರಿಗೆ ಉಚಿತ ಔಷಧಿಯನ್ನು ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು