Categories: ಉಡುಪಿ

ಉಡುಪಿ: ಮತದಾನ ಮಾಡಿದ ರಕ್ಷಿತ್‌ ಮದುವೆ ಬಗ್ಗೆ ಹೇಳಿದ್ದೇನು ನೋಡಿ

ಉಡುಪಿ: ಮತದಾನ ಮಾಡುವುದು ಬಹಳ ಮುಖ್ಯ ಅದು ನಮ್ಮ ಜವಾಬ್ದಾರಿ ಎಂದು ನಟ ರಕ್ಷಿತ್‌ ಶೆಟ್ಟಿ ಹೇಳಿದರು.

ಹುಟ್ಟೂರಲ್ಲಿ ಮತದಾನ ಮಾಡಿದ ಬಳಿ ಅವರು ಮಾತನಾಡಿದರು. ಮತದಾನ ಮಾಡಲು ಬೆಂಗಳೂರಿನಿಂದ ಬಂದಿದ್ದೇನೆ. ಮತದಾನ ಮಾಡುವುದು ಬಹಳ ಮುಖ್ಯ ಅದು ನಮ್ಮ ಜವಾಬ್ದಾರಿ.

ನನಗೆ ಪಕ್ಷದ ಮೇಲೆ ಒಲವಿದೆ, ಪ್ರಚಾರಕ್ಕೆ ಹೋಗಲ್ಲ ಎಂದರು. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು. ನಾನು ಚಿಕ್ಕವನಾಗಿದ್ದಾಗ ಉಡುಪಿ ನಗರ ಬೆಳೆಯಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು. ಹಳ್ಳಿ ಭಾಗದಲ್ಲಿ ಮತದಾನ ಬಗ್ಗೆ ಜನಕರಿಗೆ ಕಾಳಜಿ ಜಾಸ್ತಿ ಇದೆ. ನಮ್ಮ ನಾಯಕ ಯಾರಾಗಬೇಕು ಎಂದು ನಿರ್ಧರಿಸಿ ಜನ ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುತ್ತಾರೆ. ಸಿಟಿ ಲೈಫ್ ಬೇರೆ ಆಗಿರುತ್ತದೆ. ಯಾವ ನಾಯಕರು ಅಧಿಕಾರಕ್ಕೆ ಬರುತ್ತಾರೆ ಅಂತ ನಾವು ನಿರೀಕ್ಷೆ ಮಾಡುತ್ತಿದ್ದೇವೆ. ಯುವಜನರು ಯಾರನ್ನು ಆಯ್ಕೆ ಮಾಡುತ್ತಾರೆ ಅವರು ನಮ್ಮ ದೇಶದ ಭವಿಷ್ಯ ಆಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಗೆ ಹೊಸ ಹೊಸ ಮುಖಗಳು ಬರಲೇಬೇಕು. ಹೊಸ ನಾಯಕರು ಬಂದಾಗ ಹೊಸ ಹೊಸ ನಿರೀಕ್ಷೆಗಳು ಇರುತ್ತದೆ.
ರಿಚರ್ಡ್ ಆಂಟನಿ ಫ್ರೀ ಪ್ರೋಡಕ್ಷನ್ ನಡೆಯುತ್ತಿದೆ. ಸಪ್ತ ಸಾಗರದಚೆ ಎಲ್ಲೋ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ. ರಿಚರ್ಡ್ ಆಂಟನಿ ಫೈನಲ್ ಡ್ರಾಫ್ಟ್ ಬರೆಯುವ ಉದ್ದೇಶದಿಂದ ಯು ಎಸ್ ಹೋಗುತ್ತಿದ್ದೇನೆ ಎಂದು ರಕ್ಷಿತ್‌ ಶೆಟ್ಟಿ ಹೇಳಿದರು. ಇಲ್ಲಿ ರಾತ್ರಿ ಇದ್ದಾಗ ಅಲ್ಲಿ ಬೆಳಗ್ಗೆ ಇರೋದ್ರಿಂದ ಕೆಲಸ ಮಾಡಲು ಸುಲಭ ಆಗುತ್ತದೆ. ಫೋನ್ ಕಾಲ್ ಡಿಸ್ಟರ್ಬೆನ್ಸ್ ಬೇಡ ಎಂದು ಅಮೆರಿಕಕ್ಕೆ ಹೋಗುತ್ತಿದ್ದಾರೆ. ತುಂಬಾ ಮಂದಿ ಪ್ರಚಾರಕ್ಕೆ ಬನ್ನಿ ಎಂದಿದ್ದರು. ನಾನು ರಾಜಕೀಯ ಪ್ರಚಾರಕ್ಕೆ ಹೋಗುವುದಿಲ್ಲ. ನಾನು ಹೆಚ್ಚು ಮಾತನಾಡಿದರೆ ರಾಜಕಾರಣಿಗಳ ಹೆಸರುಗಳು ಬಾಯಿಗೆ ಬರುತ್ತದೆ.
ಮದುವೆ ಬಗ್ಗೆ ಮುಂದೆ ನೋಡೋಣ ಎಂದು ರಕ್ಷಿತ್‌ ಶೆಟ್ಟಿ ಹೇಳಿದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago