ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯ ವಿವಿಧ ಕಡೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ವಿಜಯ ಕುಮಾರ್ ಎಂದು ಗುರುತಿಸಲಾಗಿದೆ.
ಡಿ.19ರಂದು ಸಂಜೆ ನೀಲಾವರ ಕ್ರಾಸ್ ಬಳಿ ಪೊಲೀಸರು ತಪಾಸಣೆ ಮಾಡುತ್ತಿರುವಾಗ ಈತನನ್ನು ಬಂಧಿಸಿದ್ದಾರೆ. ಈತನು ಬ್ರಹ್ಮಾವರ ಮತ್ತು ಕೋಟ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.
2022ರ ಮಾರ್ಚ್ ಮತ್ತು ಎಪ್ರೀಲ್ ತಿಂಗಳ ಮಧ್ಯಾವಧಿಯಲ್ಲಿ ಕಾಡೂರು ಗ್ರಾಮದ ತಂತ್ರಾಡಿ ಸದಾಶಿವ ಮಹಾಬಲೇಶ್ವರ ರಾವ್ ಹಳೇ ಮನೆಯ ಬಾಗಿಲು ಮುರಿದು 1.40 ಲಕ್ಷ ಮೌಲ್ಯದ ಏಳು ಮೂಟೆ ಕಾಳು ಮೆಣಸುಗಳನ್ನು ಕಳವು ಮಾಡಿರುವ ಪ್ರಕರಣ, ಜುಲೈ ತಿಂಗಳಲ್ಲಿ ರಾತ್ರಿ ನಡೂರು ಗ್ರಾಮದ ನಡೂರು ಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಒಂದು ಇಂಡೇನ್ ಕಂಪೆನಿಯ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣ, ಅದೇ ತಿಂಗಳಲ್ಲಿ ಯಡ್ತಾಡಿ ಗ್ರಾಮದ ವಾಣಿ ಭಂಡಾರಿ ಅವರ ಮನೆಯಲ್ಲಿ ರಾತ್ರಿ ಮನೆಯ ಬಾಗಿಲು ಮುರಿದು 5.04 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 15 ಸಾವಿರ ನಗದನ್ನು ಕಳವು ಮಾಡಿದ್ದಾನೆ. ಅಲ್ಲದೆ, ನವೆಂವರ್ ತಿಂಗಳಿನಲ್ಲಿ ಬಿಲ್ಲಾಡಿ ಸುಜಾತ ಶೆಟ್ಟಿ ಎಂಬವರ ಮನೆ ಕಳ್ಳತನ. ಆರೂರು ಗ್ರಾಮದ ಮೇಲಡ್ಪು ಭಾಸ್ಕರ ಶೆಟ್ಟಿ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆರೋಪಿಯಿಂದ ಒಟ್ಟು 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…