ಉಡುಪಿ: ಚುನಾವಣಾ ಸಮಯದಲ್ಲಿ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.
ಇಂದು ಮುಂಜಾನೆ ಬೆಂಗಳೂರು ರಿಜಿಸ್ಟರ್ ನ ಇನ್ನೊವಾ ಕಾರಿನಲ್ಲಿ ಅಧಿಕಾರಿಗಳ ತಂಡ ಉಡುಪಿ ಗೆ ಆಗಮಿಸಿದೆ. ಏಕಾಕಾಲದಲ್ಲಿ ಜಿ.ಶಂಕರ್ ಮನೆ ಸೇರಿ, ಸಂಸ್ಥೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಂಸ್ಥೆಯ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.