ಉಡುಪಿ: ಕಟಪಾಡಿ ಶ್ರೀಗುರುವನ ಫೌಂಡೇಶನ್ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಕಟಪಾಡಿಯ ಏಣಗುಡ್ಡೆಯಲ್ಲಿ ಡಿ. 4ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಫೌಂಡೇಶನ್ನ ಅಧ್ಯಕ್ಷ ಮಟ್ಟು ಹರೀಶ್ ಮಧ್ಯಸ್ಥ ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುರುವನದಲ್ಲಿ ಶ್ರೀ ಗುರು ದತ್ತಾತ್ರೇಯ, ಆದಿ ಶ್ರೀ ಶಂಕರಾಚಾರ್ಯ, ಶ್ರೀ ಬಸವಣ್ಣ, ಬ್ರಹ್ಮ ಶ್ರೀ ನಾರಾಯಣ ಗುರು, ಶ್ರೀ ಭಗವಾನ್ ನಿತ್ಯಾನಂದ, ಶ್ರೀ ವಾದಿರಾಜ ತೀರ್ಥ ಶ್ರೀಪಾದರು, ಶ್ರೀ ಮಾಧವ ಮಂಗಳ ಪೂಜಾರ್ಯರು, ಶ್ರೀ ರಾಮಾನುಜಾಚಾರ್ಯರು, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ಶ್ರೀ ವಾಲ್ಮಿಕಿ, ಶ್ರೀ ವ್ಯಾಸರು, ಶ್ರೀ ಕನಕದಾಸರು, ಪುರಂದರದಾಸರು, ತ್ಯಾಗರಾಜರ ಗುಡಿಗಳನ್ನು ನಿರ್ಮಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಫೌಂಡೇಶನ್ ಖಜಾಂಚಿ ರಾಜಶೇಖರ್ ಜಿ., ಸಂಚಾಲಕ ಪ್ರೇಮ್ಕುಮಾರ್ ಇದ್ದರು.