ಉಡುಪಿ: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಮ್ಮಿಲನ 2023 ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಲಾಯಿತು.
ಉಡುಪಿ ಶಾಸಕ ಕೆ. ರಘುಪತಿ ಭಟ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರಿಧರ್ ಆಚಾರ್ಯ, ಮಂಗಳೂರು ಕೆ.ಎಂ.ಸಿ ಅಸೋಸಿಯೆಟ್ ಪ್ರೊ. ರಮೇಶ್ ಹೊಳ್ಳ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಟಿ. ಕೃಷ್ಣಪ್ಪ, ಅಧ್ಯಕ್ಷ ಸದಾನಂದ ನಾಯಕ್, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದಿಕ್, ಶಾಲಾ ಮುಖ್ಯೋಪಾಧ್ಯಾಯ ಸಂತೋಷ ಕರ್ನೇಲಿಯೊ ಉಪಸ್ಥಿತರಿದ್ದರು.