ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ನಗರ ಸಭೆ ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಬಾಲಭವನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ “ಕರಾವಳಿ ಬೈಪಾಸ್ ಅಂಗನವಾಡಿ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಟಿ.ಜಿ ಹೆಗ್ಡೆ, ಸವಿತಾ ಹರೀಶ್ ರಾಮ್, ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷ ರೂಪ, ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ವೀಣಾ, ಸಹಾಯಕ ಯೋಜನಾಧಿಕಾರಿ ಕುಮಾರ್ ನಾಯ್ಕ್, ಅಂಗನವಾಡಿ ಮೇಲ್ವಿಚಾರಕಿ ಶೈಲ, ಅಂಗನವಾಡಿ ಶಿಕ್ಷಕಿ ಅನಿತಾ, ಸಹಾಯಕಿ ಗೀತಾ ಉಪಸ್ಥಿತರಿದ್ದರು.