Categories: ಉಡುಪಿ

ಉಡುಪಿ: ಪಿತ್ರೋಡಿಯ ಕಲಾಯಿ ಬೈಲ್ ನ ಬಳಿ ಶಿಲಾಶಾಸನ ಪತ್ತೆ

ಉಡುಪಿ: ಉದ್ಯಾವರದ ಪಿತ್ರೋಡಿಯ ಕಲಾಯಿ ಬೈಲ್ ನ ಬಳಿ ಶಿಲಾಶಾಸನವೊಂದು ಪತ್ತೆಯಾಗಿದೆ. ಶಾಸನದಲ್ಲಿ ಎಡ ಹಾಗೂ ಬಲದಲ್ಲಿ ಸೂರ್ಯ, ಚಂದ್ರನ ಆಕೃತಿ ಇದೆ. ಅದರ ಮಧ್ಯದಲ್ಲಿ ಲಿಂಗದ ಮೇಲೆ ಕುಳಿತ ಬಸವನ ಚಿತ್ರವಿದೆ.

ಕೆಳಗಡೆ ಬರಹ ಇರುವುದು ಕಂಡುಬಂದಿದೆ. ಎರಡು ಫೀಟ್ ಅಗಲ, ಐದು ಫೀಟು ಎತ್ತರದ ಈ ಶಾಸನ ನೆಲದಲ್ಲಿ ಹುದುಗಿದೆ. ಇದರ ಪಕ್ಕದಲ್ಲಿ ಎರಡು ನಾಗಬನ ಇದೆ. ಶಾಸನದ ಎದುರುಗಡೆ ವಿಶಾಲವಾದ “ಪೇರಳೆ” ನಾಮಾಂಕಿತ ಡೊಡ್ಡಕೆರೆ ಇದೆ.

ದತ್ತಾತ್ರೇಯಯ ಭಜನಾ ಮಂಡಳಿಯ ವಾರ್ಷಿಕೋತ್ಸವದಂದು ಓಕುಳಿಯಾಡಿ ಈ ಪೇರಳೆ ಕೆರೆಯಲ್ಲಿ ಸ್ನಾನ ಮಾಡುವುದು ಇಲ್ಲಿನ ವಾಡಿಕೆ. ನಾಗಬನದಲ್ಲಿ ಸೌರ ಮಾನಯುಗಾದಿಯಂದು ಸ್ಥಳೀಯರು ಬಂದು ಪೂಜೆ ಮಾಡುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು ತಿಳಿಸಿದ್ದಾರೆ.

Sneha Gowda

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

3 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

4 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

4 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

4 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

5 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

5 hours ago