ಉಡುಪಿ: ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದೆ. ಆದರೆ ಬೇರೆ ಪಕ್ಷ ಸೇರುವ ಇಚ್ಛೆ ಹೊಂದಿಲ್ಲ. ರಾಜಕೀಯ ರಂಗಪ್ರವೇಶ ಮಾಡಬೇಕಾದರೆ ಈಗಿನ ಹುದ್ದೆಗೆ ರಾಜೀನಾಮೆ ನೀಡುವುದು ಅನಿವಾರ್ಯ. ಆದಾದ ಬಳಿಕವೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯ ಎಂದು ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ನವೆಂಬರ್ ವರೆಗೆ ಹಿಂದುಳಿದ ಲ ವರ್ಗದ ಆಯೋಗದ ಅಧಿಕಾರಾವಧಿ ಇದೆ. ಈ ಹುದ್ದೆಯಲ್ಲಿ ತನಗೆ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಸಾಧ್ಯವಾಗಿದೆ. ಈಗಲೂ ಜನರು ಅನೇಕ ಕೆಲಸಗಳಿಗೆ ತಮ್ಮ ಬಳಿಗೆ ಬರುತ್ತಾರೆ. ಚುನಾಯಿತ ಪ್ರತಿನಿಧಿಯಾದರೇ ನೇರವಾಗಿ ಜನರ ಕೆಲಸ ಮಾಡಿ ಕೊಡುವುದಕ್ಕೆ ಸಾಧ್ಯವಾಗುತ್ತದೆ ಎಂದು ಹೇಳಿದರು.