News Karnataka Kannada
Sunday, May 05 2024
ಉಡುಪಿ

ಉಡುಪಿ: ಮುಂದಿನ ಸವಾಲು ಎದುರಿಸಲು ಪತ್ರಕರ್ತರು ಸಿದ್ಧರಾಗುವುದು ಅಗತ್ಯ- ಕೆ.ಪಿ.ರಾವ್

Udupi: Journalists need to be ready to face the next challenge: KP Rao
Photo Credit : News Kannada

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕೀಲಿಮಣೆ ತಜ್ಞ, ವಿಜ್ಞಾನಿ ನಾಡೋಜ ಕೆ.ಪಿ.ರಾವ್ ಅವರು, ಬದಲಾಗುತ್ತಿರುವ ಇಂದಿನ ತಾಂತ್ರಿಕ ಯುಗದಲ್ಲಿ ಪತ್ರಕರ್ತರು ಕೆಲಸ ಕೊಳ್ಳುವ ಭೀತಿಯಲ್ಲಿದ್ದಾರೆ. ಆದ್ದರಿಂದ ಮುಂದೆ ಬರುವ ಸವಾಲುಗಳನ್ನು ಎದುರಿಸಲು ಪತ್ರಕರ್ತರು ಇಂದೇ ಸಿದ್ಧರಾಗಬೇಕಾದ ಅಗತ್ಯ ಇದೆ ಎಂದು ಹೇಳಿದರು.

ಇಂದು ಚಾಟ್-ಜಿಪಿಟಿಯಂತಹ ತಂತ್ರಜ್ಞಾನದಲ್ಲಿ ನಾವು ಇದ್ದೇವೆ. 10 ಸೆಂಕೆಂಡ್‌ನಲ್ಲಿ 500 ಪದಗಳನ್ನು ಬರೆಯುವಂತಹ ಮಟ್ಟಕ್ಕೆ ತಂತ್ರಜ್ಞಾನ ಬೆಳೆದು ನಿಂತಿದೆ. ಇಂದು ಸಾಮಾನ್ಯ ಬುದ್ದಿಮತ್ತೆಗಿಂತ ಕೃತಕ ಬುದ್ದಿಮತ್ತೆಯ ಆದ್ಯತೆ ನೀಡಲಾಗುತ್ತಿದೆ. ಇಂದರಿಂದ ಪತ್ರಕರ್ತರು ಕೆಲಸ ಕಳೆದುಕೊಳ್ಳುವ ಅಪಾಯಕ್ಕೆ ಬಂದು ತಲುಪಿದ್ದಾರೆ. ಸುಸ್ಥಿರ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ನಾಳೆ ಏನಾಗ ಬಹುದು ಎಂಬ ಸಾಮಾನ್ಯ ಕಲ್ಪನೆ ಪತ್ರಕರ್ತರಲ್ಲಿ ಮೂಡಬೇಕು ಎಂದರು.

ಇದೇ ಸಂದರ್ಭದಲ್ಲಿ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಆರಾಮ ಪಡುಬಿದ್ರಿ ಅವರನ್ನು ಸಮ್ಮಾನಿಸ ಲಾಯಿತು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ವಂದಿಸಿದರು. ಸದಸ್ಯ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು