News Karnataka Kannada
Wednesday, May 01 2024
ಉಡುಪಿ

ಉಡುಪಿ: ಕಮಲಾಕ್ಷಿ ಸೊಸೈಟಿಯ ವಂಚನೆ ಪ್ರಕರಣ, ಸೊಸೈಟಿ ಕಚೇರಿಯಲ್ಲಿ‌ ಪೊಲೀಸರಿಂದ ಶೋಧ

Kamalakshi Society fraud case: Police conduct searches at society's office
Photo Credit : News Kannada

ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ‌ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಇಂದು ಉಡುಪಿ ಕಚೇರಿಯ ಬೀಗ ತೆರೆದು ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು.

ಠೇವಣಿದಾರರೊಬ್ಬರು ಉಡುಪಿ‌ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸೊಸೈಟಿ ಅಧ್ಯಕ್ಷ ಬಿ ವಿ ಲಕ್ಷ್ಮೀನಾರಾಯಣ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅದರಂತೆ ಇಂದು ಪೊಲೀಸರು ಕಚೇರಿಯ‌ ಬೀಗ ತೆರೆದು‌ ಪರಿಶೀಲನೆ ನಡೆಸಿದರು.

ಇದೀಗ ಒಂದೊಂದೆ ಠೇವಣಿದಾರರು ಲಕ್ಷ್ಮೀನಾರಾಯಣ ವಿರುದ್ಧ ದೂರು ನೀಡಲು ಮುಂದಾಗುತ್ತಿದ್ದು, ಒಟ್ಟು 70 ಲಕ್ಷ ರೂ. ಅಧಿಕ ಮೊತ್ತವನ್ನು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನೂ ಹಲವು ದೂರುಗಳು ದಾಖಲಾಗುವ ಸಾಧ್ಯತೆ ಇದ್ದು, ಆ ಬಳಿಕವೇ ಒಟ್ಟು ಎಷ್ಟು ಮೊತ್ತದ ವಂಚನೆ‌ ಆಗಿದೆ ಎಂಬುವುದು ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು