ಉಡುಪಿ: ಕೊಡವೂರು ಗ್ರಾಮದಲ್ಲಿ ಅಸಮರ್ಪಕ ಒಳಚರಂಡಿ ವ್ಯವಸ್ಥೆಯಿಂದ ಕೊಳಚೆ ನೀರು ನಿಂತು ಗಬ್ಬು ವಾಸನೆ ಹರಡುತ್ತಿದ್ದು, ಸೊಳ್ಳೆ ಉತ್ಪತ್ತಿಯ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯೂ ಸೃಷ್ಟಿಯಾಗಿದೆ.
ಈ ಹಿನ್ನೆಲೆಯಲ್ಲಿ ಚರಂಡಿ ಕಾಮಗಾರಿಯನ್ನು ಶೀಘ್ರವೇ ಸಂಪೂರ್ಣಗೊಳಿಸುವಂತೆ ಒತ್ತಾಯಿಸಿ ಕನ್ನಡ ರಕ್ಷಣಾ ವೇದಿಕೆಯ ಉಡುಪಿ ತಾಲೂಕು ಘಟಕದ ವತಿಯಿಂದ ಶಾಸಕ ರಘುಪತಿ ಭಟ್ ಹಾಗೂ ನಗರಸಭೆಯ ಪೌರಾಯುಕ್ತರಿಗೆ ಮನವಿ ನೀಡಲಾಯಿತು.
ಕರವೇ ಉಡುಪಿ ತಾಲೂಕು ಅಧ್ಯಕ್ಷ ಪ್ರಭಾಕರ ಪೂಜಾರಿ, ಮಹಿಳಾ ಅಧ್ಯಕ್ಷೆ ಮಮತಾ ಪ್ರಭಾಕರ್, ಸಂಘಟನಾ ಕಾರ್ಯದರ್ಶಿ ಪ್ರಶಾಂತ ಅಮೀನ್, ಮಹಿಳಾ ಘಟಕದ ಕಾರ್ಯದರ್ಶಿ ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು