ಉಡುಪಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಶಿವಸೇನೆ ಹಾಗೂ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನೇತೃತ್ವದ ನಿಯೋಗವು ಇಂದು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಮನವಿ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೆಂದ್ರ ನಾಯಕ್, ಜಿಲ್ಲಾ ಸಲಹೆಗಾರ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಮಹಿಳಾ ಸಲಹೆಗಾರ್ತಿ ಸುನಂದ ಕೋಟ್ಯಾನ್, ಬೃಹ್ಮಾವರ ತಾಲೂಕು ಅಧ್ಯಕ್ಷ ಫ್ರ್ಯಾಂಕಿ ಡಿ’ಸೋಜ ಕೊಳಲಗಿರಿ, ಬೃಹ್ಮಾವರ ತಾಲೂಕು ಮಹಿಳಾ ಅಧ್ಯಕ್ಷೆ ದೇವಕೀ ಬಾರ್ಕೂರು, ಉಡುಪಿ ತಾಲೂಕು ಅಧ್ಯಕ್ಷ ಅರಾ ಪ್ರಭಾಕರ್ ಪೂಜಾರಿ, ಕಾಪು ತಾಲೂಕು ಮಹಿಳಾ ಅಧ್ಯಕ್ಷೆ ಗೀತಾ ಪಾಂಗಳ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷೆ ಮಮತಾ, ಜಿಲ್ಲಾ ಸದಸ್ಯರಾದ ಕೃಷ್ಣ, ಸುಲತಾ, ಅನುಷಾ, ಜ್ಯೋತಿ ಅಶೋಕ್ ಉಪಸ್ಥಿತರಿದ್ದರು.