ಉಡುಪಿ

ಉಡುಪಿ: ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸುವುದಿಲ್ಲ, ಬಿಜೆಪಿ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ

ಉಡುಪಿ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಗಾಗಿ ಕೆಲಸ ಮಾಡುವ ಯಾರನ್ನೆ ಆಗಲಿ ಸ್ವಾಗತಿಸುತ್ತೇವೆ. ತಳಮಟ್ಟದ ಸಂಘಟನೆ ಇರುವ ಬಿಜೆಪಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಗುಜರಾತ್ ಹಾಗೂ ಉತ್ತರಕಾಂಡ್ ರಾಜ್ಯದ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲಿಯೂ ಬದಲಾವಣೆಯ ನಿರೀಕ್ಷೆಗಳು ಇದೆ. 3-4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ ಎಂದರು.

ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರುವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ. 243 ಬೂತ್‌ಗಳಲ್ಲೂ ಪಕ್ಷ ಸಶಕ್ತವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಗಲುಗನಸು ಕಾಣುವುದು ಬೇಡ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago