News Karnataka Kannada
Monday, May 20 2024
ಉಡುಪಿ

ಉಡುಪಿ: ಬೆಳಿಗ್ಗೆ, ಸಂಜೆ ಉಚಿತ ನೈಂಟಿ ಕೊಡಿ, ಮದ್ಯಪ್ರಿಯರಿಂದ ವಿನೂತನ ಪ್ರತಿಭಟನೆ

Udupi: Liquor lovers stage protest against free nainti in the morning and evening
Photo Credit : News Kannada

ಉಡುಪಿ: ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮದ್ಯದ ದರ ಏರಿಸಿದ್ದು, ಇದರಿಂದ ಕೂಲಿ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಸರಕಾರ ಉಚಿತ ಗ್ಯಾರಂಟಿ ಯೋಜನೆಯಂತೆ ಮದ್ಯಪ್ರಿಯರಿಗೂ ಉಚಿತ ಮದ್ಯ ನೀಡಬೇಕೆಂದು ಮದ್ಯಪ್ರಿಯರು ಸರಕಾರವನ್ನು ಒತ್ತಾಯಿಸಿದ್ದರು.

ಉಚಿತ ಮದ್ಯಕ್ಕಾಗಿ ಆಗ್ರಹಿಸಿ ಉಡುಪಿ ನಾಗರಿಕ ಸಮಿತಿ ನೇತೃತ್ವದಲ್ಲಿ ಮದ್ಯಪ್ರಿಯರು ನಗರದ ಚಿತ್ತರಂಜನ್ ವೃತ್ತದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಸರಕಾರದ ಗಮನ ಸೆಳೆದರು. ಬಳಿಕ ಮಾತನಾಡಿದ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಿಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಮದ್ಯ ಉಚಿತವಾಗಿ ‌ನೀಡಬೇಕು. ಸರಕಾರಕ್ಕೆ ಹೆಚ್ಚು ಆರ್ಥಿಕ ಬಲ ನೀಡುವುದೇ ಮದ್ಯಪ್ರಿಯರು. ಆದರೆ, ಮದ್ಯ ಸೇವಿಸಿ ಸರಕಾರಕ್ಕೆ ಆರ್ಥಿಕ ಬಲ ನೀಡುತ್ತಿರುವ ಮದ್ಯಪ್ರಿಯರಿಗೆ, ಬಜೆಟ್ ನಲ್ಲಿ ಮದ್ಯದ ಬೆಲೆ ಏರಿಕೆ ಮಾಡಿ ಸರಕಾರ ಅನ್ಯಾಯ ಮಾಡಿದೆ ಆಕ್ರೋಶ ವ್ಯಕ್ತಪಡಿಸಿದರು.

ಮದ್ಯ ವ್ಯಸನಿಗಳಿಂದಲೇ ಸರ್ಕಾರದ ಬೊಕ್ಕಸ ತುಂಬುತ್ತಿದೆ. ಮದ್ಯದ ಬೆಲೆ ಏರಿಕೆಯಿಂದ ಕೂಲಿ ಕಾರ್ಮಿಕರು ಮದ್ಯ ಸೇವಿಸಲು ಅಸಹಾಯಕ ಪರಿಸ್ಥಿತಿ ಎದುರಿಸುವಂತಾಗಿದೆ. ಸರ್ಕಾರವು ಉಚಿತ ಭಾಗ್ಯಗಳನ್ನು ನೀಡಿದಂತೆ ಕಾರ್ಮಿಕ ವರ್ಗದವರಿಗೆ ಉಚಿತ ಮದ್ಯವನ್ನು ನೀಡುವ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಮದ್ಯಪ್ರಿಯರು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಗೋವಿಂದರಾಜ್ ಶೆಟ್ಟಿ, ಶಂಕರ, ಶೇಖರ, ಹನುಮಂತ, ನೀಲಪ್ಪ, ಮಂಜು, ಕನಕಪ್ಪ ಮೊದಲಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು