ಉಡುಪಿ: ಮಾನಸಿಕ ಅಸ್ವಸ್ಥತೆಯಿಂದ ಬೆತ್ತಲೆಯಾಗಿ ಸುತ್ತಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿ, ದೊಡ್ಡಣಗುಡ್ಡೆಯ ಬಾಳಿಗ ಆಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ವ್ಯಕ್ತಿಯನ್ನು 55ವರ್ಷದ ಶ್ರೀಧರ್ ಎಂದು ಗುರುತಿಸಲಾಗಿದೆ. ಇವರು ಮಾನಸಿಕ ಅಸ್ವಸ್ಥರಾಗಿ ರಾಷ್ಟ್ರೀಯ ಹೆದ್ದಾರಿ 66ರ ಹನುಮಂತ ನಗರದ ಬಳಿ ಬೆತ್ತಲೆಯಾಗಿ ತಿರುಗಾಡುತ್ತಿದ್ದು, ಸಾರ್ವಜನಿಕರ ಮನೆಗಳಿಗೂ ಪ್ರವೇಶಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಭಯಭೀತರಾದ ಸಾರ್ವಜನಿಕರು ಹಾಗೂ ಮಹಿಳೆಯರು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ವಿಷಯ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ವಿಶು ಶೆಟ್ಟಿಯವರು, ವ್ಯಕ್ತಿಯನ್ನು ರಕ್ಷಿಸಿ ತನ್ನ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿಗೆ ಕಾರ್ಕಳ ಮತ್ತು ಉಡುಪಿಯಲ್ಲಿ ಸಂಬಂಧಿಕರಿದ್ದಾರೆಂದು ತಿಳಿಸಿದ್ದಾರೆ. ಸಂಬಂಧಿಕರು ಮತ್ತು ಸಂಬಂಧ ಪಟ್ಟವರು ಬಾಳಿಗ ಆಸ್ಪತ್ರೆಯನ್ನು ಸಂಪರ್ಕಿಸಬೇಕಾಗಿ ವಿಶು ಶೆಟ್ಟಿಯವರು ವಿನಂತಿಸಿಕೊಂಡಿದ್ದಾರೆ.
ಈ ಬಗ್ಗೆ ನಗರ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ. ರಕ್ಷಣಾ ಕಾರ್ಯದಲ್ಲಿ ಸಹೋದರ ಯುವಕ ಮಂಡಲದ ನವೀನ್ ಅಂಚಾನ್ ಹಾಗೂ ಹನುಮಂತ ನಗರದ 9ನೇ ತರಗತಿಯ ವಿದ್ಯಾರ್ಥಿ ಶಬರೀಶ್ ಸಹಕರಿಸಿದ್ದಾರೆ..
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…
ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…
ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.