ಉಡುಪಿ: ಕಾಪು ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬೆಳ್ಳೆ ಗ್ರಾಮ ಪಂಚಾಯತ್ ವತಿಯಿಂದ ಇಂದು ಅಭಿನಂದಿಸಲಾಯಿತು.
ಬಳಿಕ ಮಾತನಾಡಿದ ಶಾಸಕರು, ಜನ ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ಆಯ್ಕೆ ಮಾಡಿದ್ದಾರೆ. ನಾವು ಪಕ್ಷಬೇದ ಮರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು ಅವರು ಇಲಾಖಾಧಿಕಾಗಳು ಸರ್ಕಾರಿ ಕಲಸ ದೇವರ ಕೆಲಸ ಎಂದು ಭಾವಿಸಿ ಜನರಿಗೆ ನಗುಮುಖದ ಸೇವೆ ನೀಡಿ ಎಂದರು.
ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧಾಕರ್ ಪೂಜಾರಿ, ಉಪಾಧ್ಯಕ್ಷರಾದ ಸಂಧ್ಯಾ ಶೆಟ್ಟಿ, ಬೆಳ್ಳೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುಧಾಕರ್ ಶೆಟ್ಟಿ ಹಾಗೂ ಬೆಳ್ಳೆ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.