News Karnataka Kannada
Monday, April 29 2024
ಉಡುಪಿ

ಉಡುಪಿ: ವಡಭಾಂಡೇಶ್ವರ- ನೆರ್ಗಿ ರಸ್ತೆ ಅಭಿವೃದ್ಧಿ, ಶಾಸಕ ರಘುಪತಿ ಭಟ್ ಪರಿಶೀಲನೆ

Mla Raghupathi Bhat inspects development of Vadabhandeshwara-Nergi road
Photo Credit : News Kannada

ಉಡುಪಿ: ನಗರಸಭಾ ವ್ಯಾಪ್ತಿಯ ವಡಭಾಂಡೇಶ್ವರ ವಾರ್ಡಿನ ಪಡ್ಲ ನೆರ್ಗಿ ರಸ್ತೆ ಅಭಿವೃದ್ಧಿ ಕುರಿತು ಸ್ಥಳೀಯರ ಬೇಡಿಕೆಯಂತೆ ಶಾಸಕ ಕೆ. ರಘುಪತಿ ಭಟ್ ಅವರು ನಗರ ಸಭೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಚರ್ಚಿಸಿದರು.

ಬಳಿಕ ರಸ್ತೆಯ ಅಂದಾಜು ಪಟ್ಟಿ ತಯಾರಿಸಿ, ಖಾಸಗಿ ಜಾಗವನ್ನು ಗುರುತಿಸಿ ಅವರಿಂದ ಒಪ್ಪಿಗೆ ಪತ್ರವನ್ನು ಪಡೆದು ತಕ್ಷಣದಲ್ಲಿ ಅಭಿವೃದ್ಧಿ ಪಡಿಸಲು ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಸಭಾ ಸದಸ್ಯರಾದ ಯೋಗೀಶ್ ಸಾಲ್ಯಾನ್, ಗಿರೀಶ್ ಅಂಚನ್, ಹಿಂದೂ ಯುವ ಸೇನೆಯ ಜಿಲ್ಲಾಧ್ಯಕ್ಷರಾದ ಮಂಜು ಕೊಳ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು, ಸ್ಥಳೀಯರಾದ ಪ್ರಸಾದ್, ರವಿ, ಉದಯ್ ಉಪಸ್ಥಿತರಿದ್ದರು.*

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು