News Karnataka Kannada
Monday, April 29 2024
ಉಡುಪಿ

ಜೂನ್ 18ರಂದು ಉಡುಪಿಯಲ್ಲಿ ವೈವಿಧ್ಯಮಯ ಜಾನಪದ ಸ್ಪರ್ಧೆ- ತಲ್ಲೂರು ಶಿವರಾಮ ಶೆಟ್ಟಿ

Tallur Shivaram Shetty to host a variety of folk competitions
Photo Credit : News Kannada

ಉಡುಪಿ: ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ ಉಡುಪಿ ಇವರ ಸಹಯೋಗದಲ್ಲಿ ನಾಡಿನ ಜನಪದ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಬರುವ ಜೂನ್ 18 ರಂದು ವೈವಿಧ್ಯಮಯ ಜಾನಪದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು‌ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ ಜಿಲ್ಲೆಯ 18 ರಿಂದ 50 ವರ್ಷ ವಯೋಮಿತಿಯೊಳಗಿನವರು ಎಲ್ಲರೂ ಭಾಗವಹಿಸಬಹುದು. ಗಾದೆ/ಒಗಟು ಹೇಳುವ ಸ್ಪರ್ಧೆ, ಜನಪದ ಗೀತೆ, ಜಾನಪದ ಗೀತೆ, ಜಾನಪದ ವಾದ್ಯ, ಜಾನಪದ ನೃತ್ಯ ಹಮ್ಮಿಕೊಳ್ಳಲಾಗಿದೆ ಎಂದರು.

ಭಾಗವಹಿಸಲು ಇಚ್ಛಿಸುವ ತಂಡಗಳು ತಮ್ಮ ಅರ್ಜಿಯನ್ನು ಭರ್ತಿ ಮಾಡಿ ಜೂ. 15ರೊಳಗೆ ಸಂಜೆ 6 ಗಂಟೆಯೊಳಗೆ ಅನುಷಾ ಆಚಾರ್ಯ, ತಲ್ಲೂರ್ಸ್ ತಾಂಬೂಲಂ, ಕಂರ್ಟ್ ಟವರ್, ಕಲ್ಪನಾ ಚಿತ್ರ ಮಂದಿರ ಎದುರು ಉಡುಪಿ, 576101 ಇಲ್ಲಿಗೆ ಕಳುಹಿಸಬೇಕೆಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪರಿಷತ್ ನ ಪ್ರಧಾನ ಕಾರ್ಯದರ್ಶಿ ರವಿರಾಜ ನಾಯಕ್, ಕೋಶಾಧಿಕಾರಿ ಪ್ರಶಾಂತ್ ಭಂಡಾರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು