ಉಡುಪಿ: ಅದ್ಭುತ ವಾಗ್ಮಿಗಳೂ, ಯಕ್ಷಗಾನ ಅರ್ಥಧಾರಿ, ಪಾತ್ರಧಾರಿಗಳಾಗಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಕುಂಬ್ಳೆ ಸುಂದರ ರಾಯರ ನಿಧನದ ವಾರ್ತೆ ತಿಳಿದು ತೀರಾ ವಿಷಾದವಾಗಿದೆ .ರಾಮಾಯಣ ಮಹಾಭಾರತ ಪುರಾಣಗಳ ಬಗ್ಗೆ ಅಧ್ಯಯನಾತ್ಮಕ ವಿದ್ವತ್ತನ್ನು ಸಂಪಾದಿಸಿದ್ದ ಅವರು ಅದನ್ನು ಕಲೆಯ ಮೂಲಕ ಜನರಿಗೆ ತಲುಪಿಸಿದ್ದರು .ಇಂದು ಕಲಾಕ್ಷೇತ್ರದ ಅಮೂಲ್ಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ಧಾರೆ.
ಅವರು ಶ್ರೀಮಠದೊಂದಿಗೆ ವಿಶೇಷ ಬಾಂಧವ್ಯ ಒಡನಾಟ ಹೊಂದಿದ್ದರು. ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಹಲವಾರು ಬಾರಿ ತಮ್ಮ ಕಲಾಪ್ರದರ್ಶನ ನೀಡಿದ್ದರು .ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.