News Karnataka Kannada
Monday, April 29 2024
ಉಡುಪಿ

ಉಡುಪಿ: ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ

Vishwaprasanna Theertha Swamiji has said that the law banning cow slaughter and conversion is not being implemented effectively.
Photo Credit : Facebook

ಉಡುಪಿ: ಅದ್ಭುತ ವಾಗ್ಮಿಗಳೂ, ಯಕ್ಷಗಾನ ಅರ್ಥಧಾರಿ, ಪಾತ್ರಧಾರಿಗಳಾಗಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಕುಂಬ್ಳೆ ಸುಂದರ ರಾಯರ ನಿಧನದ ವಾರ್ತೆ ತಿಳಿದು ತೀರಾ ವಿಷಾದವಾಗಿದೆ .ರಾಮಾಯಣ ಮಹಾಭಾರತ ಪುರಾಣಗಳ ಬಗ್ಗೆ ಅಧ್ಯಯನಾತ್ಮಕ ವಿದ್ವತ್ತನ್ನು ಸಂಪಾದಿಸಿದ್ದ ಅವರು ಅದನ್ನು ಕಲೆಯ ಮೂಲಕ ಜನರಿಗೆ ತಲುಪಿಸಿದ್ದರು .ಇಂದು ಕಲಾಕ್ಷೇತ್ರದ ಅಮೂಲ್ಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ಧಾರೆ.

ಅವರು ಶ್ರೀಮಠದೊಂದಿಗೆ ವಿಶೇಷ ಬಾಂಧವ್ಯ ಒಡನಾಟ ಹೊಂದಿದ್ದರು. ‌ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಹಲವಾರು ಬಾರಿ ತಮ್ಮ ಕಲಾಪ್ರದರ್ಶನ ನೀಡಿದ್ದರು .‌ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು