ಉಡುಪಿ: ಕರ್ನಾಟಕದ ಎಲ್ಲಾ ಪ್ರಜೆಗಳು ಮತದಾನದಲ್ಲಿ ಪಾಲ್ಗೊಳ್ಳಬೇಕು. ಮತದಾನದಿಂದ ಯಾರೂ ತಪ್ಪಿಸಿಕೊಳ್ಳಬಾರದು ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.
ಮೂಲಭೂತ ಹಕ್ಕನ್ನ ಎಲ್ಲರೂ ಬಳಸಿಕೊಳ್ಳಬೇಕು. ಮತದಾನ ಮಾಡದವರಿಗೆ ಸರಕಾರವನ್ನು ಆಕ್ಷೇಪ ಮಾಡುವ ಹಕ್ಕು ಇಲ್ಲ. ಸರ್ಕಾರದ ಸವಲತ್ತುಗಳು ಸಿಕ್ಕಿಲ್ಲ ಎನ್ನುವ ಅಧಿಕಾರ ನಮಗೆ ಇರುವುದಿಲ್ಲ. ಸುಸ್ಥಿರ ಸರ್ಕಾರವನ್ನು ಆಯ್ಕೆ ಮಾಡಲು ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.