News Karnataka Kannada
Monday, April 29 2024
ಉಡುಪಿ

ಉಡುಪಿ: ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ದ್ರೋಹ, ಅಮೃತ್‌ ಶೆಣೈ

PM Modi has betrayed the people of the country, says Amrit Shenoy
Photo Credit : News Kannada

ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಕಾನೂನು ಬಾಹಿರವಾಗಿ ಅನರ್ಹತೆಗೊಳಿಸಿರುವ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಭುಜಂಗಪಾರ್ಕಿನ ಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಮಾತನಾಡಿ, ರಾಹುಲ್ ಗಾಂಧಿ ನಿಲ್ಲಿಸಲಾಗಾದ ಶಕ್ತಿ. ಏನೂ ಮಾಡಿದ್ರು ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಇವತ್ತು ಮೋದಿ‌ ಬಟ್ಟೆ ಬಿಚ್ಚುತ್ತಿದ್ದಾರೆ. ಅವರನ್ನು ದೇಶದ ಜನತೆಯ ಮುಂದೆ ಸಂಪೂರ್ಣ ಬೆತ್ತಲೆಗೊಳಿಸುತ್ತಿದ್ದಾರೆ. ಕೇಂದ್ರ ಸರಕಾರದ ಅನ್ಯಾಯಗಳನ್ನು ಜನರಿಗೆ ತಿಳಿಸುತ್ತಿದ್ದಾರೆ‌. ಹೀಗಾಗಿ ರಾಹುಲ್ ಗಾಂಧಿಗೆ ತಡೆಯೊಡ್ಡಲು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ದಿವಾಕರ್ ಕುಂದರ್, ಅಮೃತ್ ಶೆಣೈ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ಶಿವಾಜಿ ಸುವರ್ಣ, ಹರೀಶ್ ಕಿಣಿ, ಹಸನ್, ಸಂತೋಷ್ ಕುಲಾಲ್, ಜಯರಾಮ್ ನಾಯ್ಕಾ, ಜಯ ಕುಮಾರ್, ರೋಶನಿ ಒಲಿ ವೇರಾ, ಎಂ.ಪಿ.ಮೊದಿನಬ್ಬ, ಗಣೇಶ್ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು