News Karnataka Kannada
Sunday, May 05 2024
ಉಡುಪಿ

ಉಡುಪಿ: ಕವಿ ಮುದ್ದಣ ಮಾರ್ಗದಲ್ಲಿ ಕೊಳಚೆ ಗುಂಡಿ, ಸಂಚಾರಕ್ಕೆ ಅಡಚಣೆ

Udupi: Potholes on Kavi Muddana Marg, traffic disrupted
Photo Credit : News Kannada

ಉಡುಪಿ: ಕವಿ ಮುದ್ದಣ ಮಾರ್ಗದ ತ್ರಿವೇಣಿ ಸರ್ಕಲ್ ಬಳಿ, ಸಿಗ್ನಲ್ ಕಂಬ ನಿರ್ಮಾಣ ಮಾಡಲು, ಆಳದ ಗುಂಡಿ ಅಗೆದಿದ್ದು, ನಿಧಾನ ಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದೆ.

ಸಿಗ್ನಲ್ ಪಿಲ್ಲರಿಗೆ ಗುಂಡಿ ಅಗೆಯುವಾಗ ಮುಖ್ಯ ಒಳಚರಂಡಿ  ಕೊಳವೆಗೆ ಹಾನಿಯಾಗಿದ್ದು, ಅಗೆದಿರುವ ಗುಂಡಿಯಲ್ಲಿ ತ್ಯಾಜ್ಯ ನೀರು ಬೃಹತ್‌ ಪ್ರಮಾಣದಲ್ಲಿ

ಸಂಗ್ರಹಗೊಂಡಿದೆ. ಪರಿಸರದಲ್ಲಿ ದುರ್ನಾತ ಹಬ್ಬಿದೆ. ಪಾದಚಾರಿಗಳು ಮೂಗು ಮುಚ್ಚಿಕೊಂಡು ನಡೆದಾಡ ಬೇಕಾದ ಪರಿಸ್ಥಿತಿ ಎದುರಾಗಿದೆ. ಸೂಕ್ತವಾದ ದಾರಿದೀಪದ ವ್ಯವಸ್ಥೆ ಇಲ್ಲದೆ, ಕತ್ತಲಿನಲ್ಲಿ ವಾಹನ ಸವಾರರು, ಪಾದಚಾರಿಗಳು ತ್ಯಾಜ್ಯ ನೀರಿರುವ ಗುಂಡಿಗೆ ಬೀಳುವ ಸಾಧ್ಯತೆ ಇದೆ.

ಅಲ್ಲದೆ ಇಲ್ಲಿ ವಾಹನ ದಟ್ಟಣೆ ಇರುವುದರಿಂದ ಸುಗಮ ಸಂಚಾರಕ್ಕೂ ಸಮಸ್ಯೆ ಎದುರಾಗಿದೆ. ಆದ್ದರಿಂದ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು