ಉಡುಪಿ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಶಾಖೆ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ರಕ್ಷಬಂಧನ ಕಾರ್ಯಕ್ರಮ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆಯಿತು.
ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಉಡುಪಿ ಶಾಖೆಯ ಸಂಚಾಲಕಿ ಬಿ.ಕೆ. ಸುಮಾ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರಿಗೆ ರಾಖಿ ಕಟ್ಟುವುದರ ಮೂಲಕ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಖೆಯ ಪ್ರಮುಖರಾದ ಬಿ ಕೆ ರತ್ನಾಕರ್ ಕಿಣಿ, ಬಿ ಕೆ ಮಾಲಿನಿ, ಬಿ ಕೆ ಭಾಸ್ಕರ್, ಬಿ ಕೆ ಅಶ್ವಿನಿ, ಬಿ ಕೆ ದೇವಕಿ, ಕೆ.ಪಿ.ಸಿ.ಸಿ ವಕ್ತಾರರಾದ ವೆರೋನಿಕಾ ಕರ್ನೇಲಿಯೋ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕರಾದ ರೋಶ್ನಿ ಓಲಿವರ್, ತೋನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮಾ ರವೀಂದ್ರ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಕೀರ್ತಿ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ವತ್ಸಲಾ ವಿನೋದ್, ಶರತ್ ಶೆಟ್ಟಿ, ಅರ್ಚನಾ ದೇವಾಡಿಗ, ಉದಯ್ ಪಂದುಬೆಟ್ಟು, ಶ್ರೀನಿವಾಸ್ ಹೆಬ್ಬಾರ್, ಆನಂದ್ ಪೂಜಾರಿ, ಪ್ರಮೀಳಾ ಸುವರ್ಣ, ಸೂರ್ಯ ಸಾಲ್ಯಾನ್, ಶಂಕರ್ ನಾಯ್ಕ್, ಧನಪಾಲ್, ಸಾಯಿರಾಜ್ ಕಿದಿಯೂರು, ಲಕ್ಷ್ಮೀಶ್ ಶೆಟ್ಟಿ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು.