News Karnataka Kannada
Saturday, May 04 2024
ಉಡುಪಿ

ಉಡುಪಿ: ಸಂಬಂಧಿಕರ ಅಸಹಾಯಕತೆ ಪೊಲೀಸರು, ಸಮಾಜ ಸೇವಕರಿಂದ ಮೃತ ಯುವತಿಯ ಅಂತ್ಯಸಂಸ್ಕಾರ

Relatives' helplessness, police cremate dead girl by social workers
Photo Credit : News Kannada

ಉಡುಪಿ: ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸಂಬಂಧಿಕರಿಗೆ ಅಸಹಾಯಕತೆ ಎದುರಾದಾಗ ಪೋಲಿಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ ಅಂತ್ಯಸಂಸ್ಕಾರ ನಡೆಸಿ ಮಾನವೀಯತೆ ಮೆರೆದಿದ್ದಾರೆ.

ಅಂತ್ಯಸಂಸ್ಕಾರ ಕಾರ್ಯದಲ್ಲಿ ಎ.ಎಸ್.ಐ ಸಂತೋಷ್ ಕುಮಾರ್, ಸಿಬ್ಬಂದಿ ಶಿವ ನಾಯ್ಕ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಉಪಸ್ಥಿತರಿದ್ದರು. ಲೆಸ್ಲೀ ಬಡಾನಿಡಿಯೂರ್ ನೆರವಾದರು.

ಬಡನಿಡಿಯೂರು ಇಲ್ಲಿಯ ಖಾಸಗಿಯವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಡಿಸ್ಸಾ ಮೂಲದ ಯುವತಿಯೊರ್ವಳು ಮನನೊಂದು, ವಾರದ ಹಿಂದೆ ಆತ್ಮಹತ್ಯೆ ಮಾಡಿದ್ದಳು. ಮಲ್ಪೆ ಪೋಲಿಸರು ವಾರಸುದಾರರ ಬರುವಿಕೆಗಾಗಿ, ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಟ್ಟಿದ್ದರು. ಸಂಬಂಧಿಕರು ದೂರದ ಒಡಿಸ್ಸಾದಿಂದ ಬರಲು ಅಸಹಾಯಕತೆ ವ್ಯಕ್ತಪಡಿಸಿದ್ದರು. ಹಾಗಾಗಿ ಪೋಲಿಸರು ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರು ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು