ಉಡುಪಿ: ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸಂಬಂಧಿಕರಿಗೆ ಅಸಹಾಯಕತೆ ಎದುರಾದಾಗ ಪೋಲಿಸರು ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಜಂಟಿಯಾಗಿ ಅಂತ್ಯಸಂಸ್ಕಾರ ನಡೆಸಿ ಮಾನವೀಯತೆ ಮೆರೆದಿದ್ದಾರೆ.
ಅಂತ್ಯಸಂಸ್ಕಾರ ಕಾರ್ಯದಲ್ಲಿ ಎ.ಎಸ್.ಐ ಸಂತೋಷ್ ಕುಮಾರ್, ಸಿಬ್ಬಂದಿ ಶಿವ ನಾಯ್ಕ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಉಪಸ್ಥಿತರಿದ್ದರು. ಲೆಸ್ಲೀ ಬಡಾನಿಡಿಯೂರ್ ನೆರವಾದರು.
ಬಡನಿಡಿಯೂರು ಇಲ್ಲಿಯ ಖಾಸಗಿಯವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಡಿಸ್ಸಾ ಮೂಲದ ಯುವತಿಯೊರ್ವಳು ಮನನೊಂದು, ವಾರದ ಹಿಂದೆ ಆತ್ಮಹತ್ಯೆ ಮಾಡಿದ್ದಳು. ಮಲ್ಪೆ ಪೋಲಿಸರು ವಾರಸುದಾರರ ಬರುವಿಕೆಗಾಗಿ, ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಟ್ಟಿದ್ದರು. ಸಂಬಂಧಿಕರು ದೂರದ ಒಡಿಸ್ಸಾದಿಂದ ಬರಲು ಅಸಹಾಯಕತೆ ವ್ಯಕ್ತಪಡಿಸಿದ್ದರು. ಹಾಗಾಗಿ ಪೋಲಿಸರು ಮತ್ತು ನಾಗರಿಕ ಸಮಿತಿಯ ಕಾರ್ಯಕರ್ತರು ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಿದರು.