ಉಡುಪಿ: ಬೀಡಿನಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ಕಾಮಗಾರಿ ನಡೆದ ಕೆಲವೇ ದಿನಗಳಲ್ಲಿ ರಸ್ತೆಯ ಗುಂಡಿಗಳಿಗೆ ಹಾಕಿರುವ ಡಾಂಬರ್ ಕಿತ್ತುಬರುತ್ತಿದೆ.
ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೆ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ವರ್ಷಗಳಿಂದ ನಿರಾಶ್ರಿತರ ಪುರ್ವಸತಿ ಕೇಂದ್ರದ ಬಳಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿಲೇ ಇರುತ್ತದೆ. ಹಾಕಿದ ತೇಪೆ ಕಳಪೆ ಕಾಮಗಾರಿಯಿಂದಾಗಿ ಒಂದು ತಿಂಗಳು ಸರಿಯಾಗಿ ನಿಲ್ಲವುದಿಲ್ಲ. ಮತ್ತೆ ಯಥಾಪ್ರಕಾರ ಗುಂಡಿಗಳು ಸೃಷ್ಟಿಯಾಗುತ್ತಲೇ ಇರುತ್ತವೆ. ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದೆ. ನಗರಸಭೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವೇ ಸೂಕ್ತ ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…