ಉಡುಪಿ: ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೆಶನ್ ಕರ್ನಾಟಕ ವತಿಯಿಂದ 5ನೇ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ ‘ಕೆಬಿಕೆ ಕಪ್-2022’ ಇದೇ ಬರುವ ಡಿ. 3ಮತ್ತು 4ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಸ್ಪರ್ಧಾಕೂಟದ ಸಂಘಟಕ ಸಂತೋಷ್ ಸುವರ್ಣ ಬೊಳ್ಜೆ ಈ ಬಗ್ಗೆ ಮಾಹಿತಿ ನೀಡಿದರು. ಡಿ.3ರ ಬೆಳಿಗ್ಗೆ 9 ಗಂಟೆಗೆ ಶಾಸಕ ರಘುಪತಿ ಭಟ್ ಕರಾಟೆ ಸ್ಪರ್ಧಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಂಬಲಪಾಡಿ ದೇಗುಲದ ಧರ್ಮದರ್ಶಿ ಡಾ ನಿ. ಬೀ. ವಿಜಯ ಬಲ್ಲಾಳ್ ಆಶೀರ್ವಚನ ನೀಡಲಿದ್ದಾರೆ. ಡಿ.4ರಂದು ಸಂಜೆ 6ಕ್ಕೆ ನಡೆಯುವ ಸಮರೋಪದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದಾರೆ ಎಂದರು.
ಈ ಸ್ಪರ್ಧಾಕೂಟದಲ್ಲಿ ಕರ್ನಾಟಕದ ವಿವಿಧ ಜಿಲ್ಲೆ ಸಹಿತ ಆಂಧ್ರಪ್ರದೇಶ, ಅಸ್ಸಾಂ, ಗೋವಾ, ತೆಲಂಗಾಣ ಸೇರಿದಂತೆ 10 ರಾಜ್ಯಗಳಿಂದ 2 ಸಾವಿರ ಕರಾಟೆಪಟುಗಳು ಭಾಗವಹಿಸಲಿದ್ದಾರೆ. 6ರಿಂದ 20ವರ್ಷ ಹಾಗೂ ಮೇಲ್ಪಟ್ಟ ವಯೋಮಾನದದಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ಪರ್ಧಾಕೂಟದ ಮುಖ್ಯ ಮಾರ್ಗದರ್ಶಕ ರವಿಕುಮಾರ್ ಉದ್ಯಾವರ, ಪ್ರಮುಖರಾದ ನಿಶಾಂತ್ ಭಟ್, ಸೂರಜ್ ಕುಮಾರ್, ಅಮೃತಾ ಸದಾನಂದ್, ಅಕಾಂಕ್ಷ, ಫೈಸಲ್, ರವೀಂದ್ರ ಇದ್ದರು.