ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಹಾಗೂ ಆರ್ ವಿ ಕನ್ಸ್ಟ್ರಕ್ಷನ್ಸ್ ಸಹಯೋಗದೊಂದಿಗೆ ಮಕ್ಕಳ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಅಂಬಲಪಾಡಿ ಶ್ರೀದೇವಳದ ಭವಾನಿ ಮಂಟಪದಲ್ಲಿ ಜರಗಿತು.
ಮಕ್ಕಳ ತುಂಟಾಟವನ್ನು ಸೆರೆ ಹಿಡಿದು, ದಾಖಲೀಕರಿಸುವ ಮೂಲಕ ಜೀವನದುದ್ದಕ್ಕೂ ಸವಿನೆನಪನ್ನು ಮರುಕಳಿಸುವಂತೆ ಮಾಡುವವರು ಛಾಯಾಗ್ರಾಹಕರು ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಉಡುಪಿ ಶಾಖೆಯ ಪ್ರಬಂಧಕ ರಾಘವೇಂದ್ರ ಉಪಾಧ್ಯಾಯ ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಸಹಕಾರ ರತ್ನ ಪುರಸ್ಕೃತರಾದ ಜಯಕರ ಇಂದ್ರಾಳಿ, ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ , ಜಿಲ್ಲಾ ಕಾರ್ಯದರ್ಶಿ ವಾಮನ ಪಡುಕರೆ, ಉಪಾಧ್ಯಕ್ಷ ಸುರಭಿ ರತನ್, ಕಾರ್ಯಕ್ರಮ ಸಂಚಾಲಕ ಸಂತೋಷ್ ಕೋರಂಗ್ರಪಾಡಿ ಉಪಸ್ಥಿತರಿದ್ದರು. ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರವೀಣ್ ಕೋರೆಯ ಸ್ವಾಗತಿಸಿದರು. ದಿವಾಕರ್ ಹಿರಿಯಡ್ಕ ಧನ್ಯವಾದವಿತ್ತರು.