ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಉಡುಪಿ ಜಿಲ್ಲಾಡಳಿತ ವತಿಯಿಂದ ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಮ್ಮೇಳನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಕ್ಷಗಾನ ಕರಾವಳಿಯ ಜೀವನಾಡಿ. ಯಕ್ಷಗಾನ ಮತ್ತು ಭಾರತೀಯ ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದೆ. ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆಯಲ್ಲಿ ಯಕ್ಷಗಾನದ ಕೊಡುಗೆ ಅಪಾರ.ಹಾಗಾಗಿ ಯಕ್ಷಗಾನದ ವಿಚಾರ ಬಂದಾಗ ವಿವಾದ ಮಾಡುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಸಮಗ್ರ ಯಕ್ಷಗಾನ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಆಗಿರುವ ಶಾಸಕ ಕೆ. ರಘುಪತಿ ಭಟ್ ಮೊದಲಾದವರು ಇದ್ದರು.