ಉಡುಪಿ: ಇದೇ ಬರುವ ಡಿ.11ರಂದು 43ನೇ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಸಂಚಾಲಕ ಶ್ರೀನಿವಾಸ ಭಾರಧ್ವಾಜ್ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 5ಗಂಟೆಯವರೆಗೆ ಉಡುಪಿ ಶ್ರೀಕೃಷ್ಣ ಮಠ ಪಾರ್ಕಿಂಗ್ ಏರಿಯದ ಮಥುರಾ ಜಯಕೃಷ್ಣ ಕಲಾಭವನದಲ್ಲಿ ಈ ಸಮಾವೇಶವನ್ನು ಆಯೋಜಿಸಲಾಗಿದೆ.
ಹೆಣ್ಣು ಮಕ್ಕಳಿಗೆ ಹಾಗೂ ವಿಕಲಚೇತನರಿಗೆ ಉಚಿತ ನೊಂದಣಿ ಹಾಗೂ ಪ್ರವೇಶ ಕಲ್ಪಿಸಲಾಗಿದೆ. ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಯೋಧರು, ರೈತರು ಹಾಗೂ ಹಿರಿಯ ವಿಪ್ರ ಮುಖಂಡರುಗಳನ್ನು ಸನ್ಮಾನಿಸಲಾಗುವುದು ಎಂದರು.
ಡಿ.10ರಂದು ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದೆ. ಉಡುಪಿ ಸುತ್ತಮುತ್ತಲಿನ ಆಸಕ್ತ ವಧುವರರು ಡಿ.9ರೊಳಗೆ 2 ಪೋಸ್ಟ್ ಕಾರ್ಡ್ ಸೈಜ್ ಫೋಟೋ, 2 ಬಯೋಡಟಾ, 2 ಜಾತಕದೊಂದಿಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 82178 76335 ಅಥವಶಾ 94494 25536ನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ವೈ.ಸುಧಾಕರ್ ಭಟ್, ಮಂಜುನಾಥ್ ಉಪಾಧ್ಯಾಯ, ನಾಗರಾಜ್ ಉಪಾ ಧ್ಯಾಯ, ಜಯರಾಮ ಆಚಾರ್ಯ, ರಘುಪತಿ ರಾವ್ ಕೆ., ನಗರಸಭೆ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಉಪಸ್ಥಿತರಿದ್ದರು.