ಉಡುಪಿ: ಕೋಮುಗಳ ಮಧ್ಯೆ ಭಿನ್ನಾಭಿಪ್ರಾಯ ಸೃಷ್ಟಿಸಿ ಕೋಮುಗಲಭೆ ಹುಟ್ಟುಹಾಕುವುದೇ ಕಾಂಗ್ರೆಸ್ ನ ಅಭಿವೃದ್ಧಿಯ ಮಂತ್ರ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಗೀತಾ ವಿವೇಕಾನಂದ ಆರೋಪಿಸಿದರು.
ಬಿಜೆಪಿಯ ಉಡುಪಿ ಜಿಲ್ಲಾ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ. ಚುನಾವಣೆ ಬಂದಾಗ ಉಚಿತ ಯೋಜನೆಗಳನ್ನು ಘೋಷಣೆ ಮಾಡುತ್ತಾರೆ. ಆ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೋಡ್ತಾರೆ. ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರ ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.