ಉಡುಪಿ: ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹ ಮಾಡಿರುವುದು ಸರ್ವಾಧಿಕಾರದ ಪರಮಾವಧಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯಕುಮಾರ್ ಸೊರಕೆ ಗುಡುಗಿದ್ದಾರೆ.
ಉಡುಪಿಯಲ್ಲಿಂದು ಮಾತನಾಡಿದ ಅವರು, ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿ ವಿದೇಶದಲ್ಲಿ ಕುಳಿತವರ ಬಗ್ಗೆ ಸ್ವರ ಎತ್ತಬಾರದು, ಟೀಕಿಸಬಾರದೇ ಎಂದು ಪ್ರಶ್ನಿಸಿದ್ದಾರೆ.
ಅದಾನಿಯಂತ ವ್ಯಕ್ತಿಯ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡಬಾರದೆಂದಾದರೆ ಇದು ಪ್ರಜಾಪ್ರಭುತ್ವದಲ್ಲಿ ಎಷ್ಟರ ಮಟ್ಟಿಗೆ ಭೂಷಣ. ಎಲ್ಲದಕ್ಕೂ ಕೂಡ ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವುದು ಇವರ ನಡವಳಿಕೆಯಲ್ಲಿ ಕಾಣುತ್ತಿದೆ. ಅಧಿಕಾರ ಯಾವತ್ತೂ ಕೂಡ ಶಾಶ್ವತ ಆಗಿರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.