News Karnataka Kannada
Sunday, April 28 2024
ಉಡುಪಿ

ಉಡುಪಿ: ಮರಳು ಮಾಫಿಯಾ ವಿರುದ್ಧ ಧ್ವನಿಯೆತ್ತಿದವರ ಸ್ಕೂಟರ್‌ ಧ್ವಂಸ

Udupi: The scooter of those who raised their voices against the sand mafia was vandalized
Photo Credit : News Kannada

ಉಡುಪಿ: ಅಕ್ರಮ ಮರಳು ಸಾಗಾಟದ ವಿರುದ್ಧ ಧ್ವನಿ ಎತ್ತಿದ್ದ ಸ್ಥಳೀಯ ನಿವಾಸಿಯೊಬ್ಬರ ದ್ವಿಚಕ್ರ ವಾಹನವನ್ನು ಮರಳು ಮಾಫಿಯಾ ನಡೆಸುತ್ತಿರುವ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ಉದ್ಯಾವರ ಮಠದಕುದ್ರುವಿನಲ್ಲಿ ನಡೆದಿದೆ.

ಮಠದ ಕುದ್ರುವಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಎಗ್ಗಿಲ್ಲದೆ ಮರಳುಗಾರಿಕೆ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಅದಮಾರು ಮಠಾಧೀಶರಾದ ಈಶಪ್ರಿಯತೀರ್ಥ ಶ್ರೀಪಾದರು ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದ್ದರು. ಕಡಿವಾಣ ಹಾಕದಿದ್ದರೆ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು.

ಈ ಸುದ್ದಿಗೋಷ್ಠಿಯಲ್ಲಿ ಸ್ಥಳೀಯರಾದ ಭಾಸ್ಕರ್ ಕರ್ಕೆರ ಸಹಿತ ಇತರರು ಭಾಗವಹಿಸಿದ್ದರು. ಇದರಿಂದ ಕೆರಳಿದ್ದ ಮರಳು ಮಾಫಿಯಾದ ಕುಳಗಳು, ನಿನ್ನೆ ಮಧ್ಯರಾತ್ರಿ ಭಾಸ್ಕರ್ ಕರ್ಕೆರ ಅವರ ಸ್ಕೂಟರ್ ಅನ್ನು ಪುಡಿಗೈದು ಹಾನಿಗೊಳಿಸಿದ್ದಾರೆ. ಇಂದು ಬೆಳಿಗ್ಗೆ ಎದ್ದು ನೋಡುವಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು