News Karnataka Kannada
Monday, April 29 2024
ಉಡುಪಿ

ಉಡುಪಿ: ವಂಚನೆ ಪ್ರಕರಣ, ಕಮಲಾಕ್ಷಿ ಸೊಸೈಟಿಗೆ ಬೀಗ ಜಡಿದ ಪೊಲೀಸರು

Udupi Kamalakshi Society booked in udupi in a cheating case
Photo Credit : By Author

ಉಡುಪಿ: ಠೇವಣಿದಾರರಿಗೆ ನೂರಾರು ಕೋಟಿ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಕಮಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘಕ್ಕೆ ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ಬೀಗ ಜಡಿದಿದ್ದಾರೆ.

ಕಮಲಾಕ್ಷಿ ಸೊಸೈಟಿಯವರು ಸಾರ್ವಜನಿಕರಿಗೆ ಶೇ.10ರಿಂದ ಶೆ. 12ರಷ್ಟು ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸುಮಾರು 700 ಜನರಿಂದ 40 ರಿಂದ 50 ಕೋಟಿ ರೂ. ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಒಂದು ವರ್ಷದವರೆಗೆ ಠೇವಣಿದಾರರಿಗೆ ಬಡ್ಡಿ ನೀಡಿದ್ದರು. 2022ರ ಜೂನ್ ತಿಂಗಳಿನಿಂದ ಹೂಡಿಕೆದಾರರಿಗೆ ಬಡ್ಡಿ ನೀಡಿದೆ ಕಚೇರಿಯನ್ನು ಮುಚ್ಚಿದ್ದರು. ಈ ಕುರಿತು ಠೇವಣಿದಾರರಾಗಿರುವ ಉಡುಪಿಯ ಪ್ರಕಾಶ್ ಕಾಮತ್ ಡಿ.21ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದರು.  ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು, ಸೊಸೈಟಿಯ ಸೊತ್ತುಗಳನ್ನು ಪರಿಶೀಲಿಸಿ ಕಚೇರಿಗೆ ಬೀಗ ಜಡಿದಿದ್ದಾರೆ.

ಕಮಲಾಕ್ಷಿ ಸೊಸೈಟಿ ಹಾಗೂ ಆರೋಪಿಗಳಿಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ ಮಾಡಿ, ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಈ ಆಸ್ತಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಹೂಡಿಕೆದಾರರಿಗೆ ಪರಿಹಾರವನ್ನು ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಈವರೆಗೆ ಈ ಸೊಸೈಟಿಯಲ್ಲಿ ಹೂಡಿಕೆ ಮಾಡಿರುವ ಠೇವಣಿದಾರರು ಸೆನ್ ಅಪರಾಧ ಪೊಲೀಸ್ ಠಾಣೆಗೆ ಮಾಹಿತಿ ನೀಡದೆ ಇದ್ದಲ್ಲಿ, ತಕ್ಷಣ ಮಾಹಿತಿ ನೀಡಬೇಕು ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು