ಉಡುಪಿ: ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರಾಜ್ಯದಲ್ಲಿ ನಡೆದಿರುವ ವಿದ್ಯಾಮಾನಗಳು ಆತಂಕ ಹುಟ್ಟಿಸುತ್ತಿವೆ. ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುವ ಪ್ರೋತ್ಸಾಹ ಆತಂಕಕಾರಿ ಬೆಳವಣಿಗೆ. ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದೆ.
ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡಿದರೆ ನಾವು ಸಹಿಸಲ್ಲ. ಬಿಜೆಪಿ ಇದಕ್ಕೆ ಪ್ರತಿರೋಧ ಮಾಡುವ ಜನಪರ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಟ್ಕಳ ಶಿರಸಿಯಲ್ಲಿ ಪಾಕಿಸ್ತಾನ ಮಾದರಿಯ ಧ್ವಜಗಳು ಹಾರಿಸಿ ಕೇಕೆ ಹಾಕಿದ್ದಾರೆ. ಬೆಳಗಾವಿಯ ಸಂಭ್ರಮೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ಮೊಳಗಿವೆ. ಶಿವಮೊಗ್ಗದಲ್ಲಿ ಬಿಜೆಪಿ ಮತದಾರರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿವೆ. ಇಡೀ ರಾಜ್ಯದಲ್ಲಿ ಇಂತಹ ವಿದ್ಯಮಾನಗಳು ನಡೆಯುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು. ಹೊಸ ಮುಖ್ಯಮಂತ್ರಿ ಕಾಂಗ್ರೆಸ್ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…