ಉಡುಪಿ: ಯಕ್ಷಗಾನ ಕಲಾರಂಗ ಉಡುಪಿ ಇದರ ಯಕ್ಷನಿಧಿ ಡೈರಿ – 2023’ ಬಿಡುಗಡೆ ಕಾರ್ಯಕ್ರಮ ನಗರದ ಸಂಸ್ಥೆಯ ಕಚೇರಿಯಲ್ಲಿ ಜರಗಿತು.
ಯಕ್ಷಗಾನ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಜಿ. ಎಲ್. ಹೆಗಡೆ ಡೈರಿ ಬಿಡುಗಡೆ ಮಾಡಿ, ಸಂಸ್ಥೆ ಕಲಾವಿದರ ಕ್ಷೇಮ ಚಿಂತನೆಗೆ ಮಾಡುತ್ತಿರುವ ಕೆಲಸವನ್ನು ಶ್ಲಾಘಿಸಿದರು. ಯಕ್ಷಗಾನ ಶ್ರೇಷ್ಠ ಕಲೆಯಾಗಿದ್ದು ಅದರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವಲ್ಲಿ ಕಲಾವಿದರ ಹೊಣೆಗಾರಿಕೆ ಬಹಳವಾಗಿದೆ ಎಂದು ಕರೆ ನೀಡಿದರು.
ಕಲಾಪೋಷಕರಾದ ಯು. ವಿಶ್ವನಾಥ ಶೆಣೈ, ರಾಜಗೋಪಾಲ ಆಚಾರ್ಯ, ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ಸದಸ್ಯರಾದ ಎಚ್. ಎನ್. ಶೃಂಗೇಶ್ವರ, ಮನೋಹರ ಕೆ., ಬಿ. ಭುವನ ಪ್ರಸಾದ್ ಹೆಗ್ಡೆ, ಮುದ್ರಾಡಿ ವಿಜಯ ಕುಮಾರ್, ಕಿಶೋರ್ ಸಿ. ಉದ್ಯಾವರ, ಅನಂತರಾಜ ಉಪಾಧ್ಯ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.