ಉಡುಪಿ: ಶ್ರೀ ಕೃಷ್ಣಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಭೇಟಿ ನೀಡಿ ಕೃಷ್ಣದೇವರ ದರ್ಶನ ಪಡೆದು, ಬಳಿಕ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಉಡುಪಿಗೆ ಆಗಮಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಉಡುಪಿ ರಥಬೀದಿಯಲ್ಲಿರುವ ಅದಮಾರು ಮಠಕ್ಕೆ ಭೇಟಿ ನೀಡಿದರು.
ಅದಮಾರು ಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಂಡಿರುವ ವಿಶ್ವಪ್ರಿಯತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಶ್ರೀಗಳೊಂದಿಗೆ ಕೆಲಹೊತ್ತು ಸಮಾಲೋಚನೆ ನಡೆಸಿದರು.