ಉಡುಪಿ: ಉಪ್ಪೂರಿನ ಲಕ್ಷ್ಮೀನಗರದ ಬೂತ್ ಸಂಖ್ಯೆ 61 ರ ಅಧ್ಯಕ್ಷ ಪ್ರಭಾಕರ್ ಕುಂದರ್ ಅವರ ಮನೆಯ ವಠಾರದಲ್ಲಿ ವಿಜಯ ಸಂಕಲ್ಪ ಅಭಿಯಾನ”ಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ವಿಜಯ ಸಂಕಲ್ಪ ಅಭಿಯಾನದ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕರಾದ ಗೋಕುಲ ಕೃಷ್ಣ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ವಿದ್ಯಾ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.