Categories: ಉಡುಪಿ

ಹೆಬ್ರಿ ಅಡಾಲ್ ಬೆಟ್ಟು ಪರಿಸರದ ಚರಂಡಿಯಲ್ಲಿ ಕೊಳಚೆ ನೀರು : ಗ್ರಾಮಸ್ಥರ ಆಕ್ರೋಶ

ಕಾರ್ಕಳ:  ಹೆಬ್ರಿ ಅಡಾಲ್ ಬೆಟ್ಟು ಶಿಶುಮಂದಿರದ ಸಮೀಪ ಇರುವ ಪರಿಸರದಲ್ಲಿ ಹಾದುಹೋದ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ನಾಥ ಬೀರುತ್ತಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಅಡಾಲ್ ಬೆಟ್ಟು ಪರಿಸರದಲ್ಲಿ ಅನೇಕ ಮನೆಗಳಿದ್ದು ಈ ಭಾಗದಲ್ಲಿ ಮಳೆಗಾಲದಲ್ಲಿ ಮಳೆನೀರು ಹರಿಯುವ ಸಣ್ಣ ಚರಂಡಿ ಇದೆ.

ಹೆಬ್ರಿ ಪಟ್ಟಣದ ಹೋಟೆಲ್ ಗಳಿಂದ, ವಿನು ನಗರದಿಂದ ಕೆಲವು ಮನೆಯವರು ಹಾಗೂ ಸುತ್ತಮುತ್ತಲಿನ ಮನೆಯವರ ತ್ಯಾಜ್ಯ ನೀರನ್ನು ಇದೇ ಚರಂಡಿ ಮೂಲಕ ಬಿಡುತ್ತಿದ್ದು ಅಡಲ್ ಬೆಟ್ಟು ಬಳಿ ಚರಂಡಿ ಬ್ಲಾಕ್ ಆಗಿ ಅಲ್ಲಿಯೇ ನಿಂತು ತ್ಯಾಜ್ಯ ಕೊಳೆತು ದುರ್ನಾಥ ಬೀರುವುದರೊಂದಿಗೆ ಸೊಳ್ಳೆ ಕಾಟದಿಂದ ಮುಕ್ತಿ ದೊರೆಯದಂತಾಗಿದೆ. ಈ ಪರಿಸರದಲ್ಲಿ ಹಲವಾರು ಮಕ್ಕಳು ಶಾಲೆಗೆ ಹೋಗುತ್ತಿದ್ದು ದುರ್ನಾಥ ಹಾಗೂ ಸೊಳ್ಳೆ ಕಾಟದಿಂದ ಅನಾರೋಗ್ಯಕ್ಕೆ ತುತ್ತಾದ ಘಟನೆಗಳಿವೆ.

ಹೆಬ್ರಿ ಪಂಚಾಯತ್ ಗೆ ಮನವಿ :
ತ್ಯಾಜ್ಯ ನೀರು ಹರಿದು ಬಂದು ಈ ಭಾಗದಲ್ಲಿ ನಿಲ್ಲುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಅನೇಕ ತೊಂದರೆಗಳಾಗುತ್ತಿದೆ ಹಾಗು ಮಾರಣಾಂತಿಕ ಕಾಯಿಲೆಗಳು ಹರಡುವ ಸಾಧ್ಯತೆಗಳಿದ್ದು ತಾವು ಈ ಭಾಗದ ಪ್ರತಿ ಮನೆಯವರಿಗೂ ಇಂಗು ಗುಂಡಿಯನ್ನು ನಿರ್ಮಿಸಿಕೊಳ್ಳಲು ಸೂಚಿಸುವಂತೆ ಹಾಗೂ ವಿನು ನಗರದಿಂದ ಬರುವ ಹಾಗು ಹೋಟೆಲ್ ಗಳಿಂದ ಬರುವ ನೀರನ್ನು ಈ ತೋಡಿಗೆ ಬಿಡದಿರುವಂತೆ ಸೂಚಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಈ ಭಾಗದ ಗ್ರಾಮಸ್ಥರು ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.

ಪಂಚಾಯತ್ ನಿರ್ಲಕ್ಷ: ಈ ಪರಿಸರದಲ್ಲಿ ಹಲವಾರು ವರ್ಷಗಳಿಂದ ಈ ಸಮಸ್ಯೆ ಇದ್ದು ಹಲವಾರು ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಈ ಭಾಗದ ಸದಸ್ಯರು ಹಾಗೂ ಪಿಡಿಓ ಅವರಿಗೆ ಮನವಿ ಸಲ್ಲಿಸಲಾಗಿದ್ದು ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ಬಾರಿ ಮುಖದ ಭೇಟಿಯಾಗಿ ಹೇಳಿದರು ಕೂಡ ನೋಡುವ ಎಂದು ಉತ್ತರ ನೀಡಿ ನಿರ್ಲಕ್ಷ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಬೇರೆ ಯಾರಿಗೂ ಸಮಸ್ಯೆ ಆಗಬಾರದು ಎಂದು ನಮ್ಮ ಮನೆಯ ಕೊಳಚೆ ನೀರನ್ನು ಮನೆಯ ಪರಿಸರದಲ್ಲಿ ಇಂಗು ಗುಂಡಿ ನಿರ್ಮಾಣ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ. ಆದರೆ ಮನೆಯ ಪಕ್ಕದಲ್ಲಿ ಕಾಂಪೌಂಡ್ ತಾಗಿ ಬೇರೆಯವರ ಕೊಳಚಿ ನೀರು ಬಂದು ನಮ್ಮ ಮನೆಯ ಪಕ್ಕದಲ್ಲಿ ನಿಂತು ದುರ್ನಾಥ ಬೀರುತ್ತಿದ್ದು ದಿನನಿತ್ಯ ಸೊಳ್ಳೆ ಕಾಟದಿಂದ ವಾಸಿಸುವುದು ಕಷ್ಟವಾಗಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ವಿನಂತಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರಕಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಅಡಾಲ್ ಬೆಟ್ಟು ನಿವಾಸಿ ಸೋನಿ ಶೆಟ್ಟಿ ಎವರು ಕೇಳಿಕೊಂಡಿದ್ದಾರೆ.

ಆರೋಗ್ಯ ಇಲಾಖೆ ಗಮನ ಹರಿಸಲಿ:
ಕೊಳಚೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಕೊಂಡು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದ್ದು ಈ ಬಗ್ಗೆ ಆರೋಗ್ಯ ಇಲಾಖೆ ಕೂಡಲೇ ಎಚ್ಚೆತ್ತು ಕೊಂಡು ಸಂಬಂಧ ಪಟ್ಟವರಿಗೆ ತಿಳಿಸಿ, ಸಮಸ್ಯೆ ಬಗೆಹರಿಸುವಂತೆ ಈ ಭಾಗದ ಸ್ಥಳೀಯರು ಒತ್ತಾಯಿಸಿದ್ದಾರೆ.

Nisarga K

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago