News Karnataka Kannada
Sunday, May 05 2024
ಉಡುಪಿ

ಮೃತ ಮೀನುಗಾರರಿಗೆ ಪರಿಹಾರ ಕೊಡಲು ಸಾಧ್ಯವಾಗದ ಬಿಜೆಪಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ವೈದ್ಯ

: Bjp's mood has to be corrected, says Mankalu Vaidya
Photo Credit : News Kannada

ಉಡುಪಿ: ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕೆಂಬ ಉದ್ದೇಶದಿಂದ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ವಿರೋಧ ಮಾಡುವುದು ಮಾಮೂಲಿ. ಮೃತಪಟ್ಟ ಮೀನುಗಾರರಿಗೆ ಅವರಿಂದ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇನ್ನೂ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಕಿಡಿಕಾರಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರು ಬಾಯಿಗೆ ಬಂದ ಹಾಗೆ ಮಾತ‌ನಾಡುತ್ತಾರೆ. ಆದರೆ ನಾವು ಮಾತನಾಡಲ್ಲ. ನಾವು ಬಡವರ ಪರವಾಗಿ ಇದ್ದೇವೆ. ಸಾಮಾನ್ಯ ಜನರ ಸೇವೆ ಮಾಡುತ್ತಿದ್ದೇವೆ. ಇಷ್ಟೇ ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದರು.

ಕಾಂಗ್ರೆಸ್ ಹಿಂದಿನ ಬಾಗಿಲಿನಿಂದ ಬಂದು ಎಸ್ ಡಿಪಿಐ ಜೊತೆ ಕೈಜೋಡಿಸಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮಗೆ ಮುಂದಿನ ಬಾಗಿಲ ಬಗ್ಗೆ ಮಾತ್ರ ಗೊತ್ತಿದೆ. ಹಿಂದಿನ ಬಾಗಿಲ ಬಗ್ಗೆ ಅವರಿಗೆ ಗೊತ್ತು. ಯಾರ ಯಾರ ಮನೆಗೆ, ಯಾರ ಯಾರ ಆಫೀಸ್ ಗೆ ಎಷ್ಟು ಬಾಗಿಲು ಇದೆಯೆಂದು‌ ನನಗೆ ಗೊತ್ತಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು