News Karnataka Kannada
Friday, May 10 2024
ಉಡುಪಿ

ಸಿಂಪ್ಲಿಸಿಟಿ ಚುನಾವಣಾ ವಿಷಯ ಆಗಬಾರದು, ಕೆಲಸ ಮುಖ್ಯ ಆದ್ಯತೆಯಾಗಬೇಕು: ಕೆ. ಜಯಪ್ರಕಾಶ್ ಹೆಗ್ಡೆ

ನಾಯಕರ ಹೆಸರಿನಲ್ಲಿ ಮತ ಪಡೆದು ಗೆದ್ದವರು ಕ್ಷೇತ್ರದ ಕೆಲಸ ಮಾಡಲ್ಲ. ಮತ್ತೊಂದು ಅವಧಿಗೆ ಪುನಃ ನಾಯಕರ ಹೆಸರಿನಲ್ಲಿ ಮತ ಕೇಳುತ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಕ್ಷೇತ್ರದ ಅಭಿವೃದ್ಧಿ ಮಾಡಿದವರಿಗೆ ಮತ ನೀಡಬೇಕು. ಕ್ಷೇತ್ರದ ಕೆಲಸ ಕಾರ್ಯದ ಆಧಾರದಲ್ಲಿ ಮತ ಕೇಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
Photo Credit : NewsKarnataka

ಉಡುಪಿ: ನಾಯಕರ ಹೆಸರಿನಲ್ಲಿ ಮತ ಪಡೆದು ಗೆದ್ದವರು ಕ್ಷೇತ್ರದ ಕೆಲಸ ಮಾಡಲ್ಲ. ಮತ್ತೊಂದು ಅವಧಿಗೆ ಪುನಃ ನಾಯಕರ ಹೆಸರಿನಲ್ಲಿ ಮತ ಕೇಳುತ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಕ್ಷೇತ್ರದ ಅಭಿವೃದ್ಧಿ ಮಾಡಿದವರಿಗೆ ಮತ ನೀಡಬೇಕು. ಕ್ಷೇತ್ರದ ಕೆಲಸ ಕಾರ್ಯದ ಆಧಾರದಲ್ಲಿ ಮತ ಕೇಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಅಧ್ಯಕ್ಷೀಯ ಚುನಾವಣೆ ವ್ಯವಸ್ಥೆ ಇಲ್ಲ. ಯಾರು ಕ್ಷೇತ್ರದ ಕೆಲಸ ಮಾಡುತ್ತಾರೆಯೋ ಅವರಿಗೆ ಮತ ಹಾಕಬೇಕು. ನಾನು ಯಾವುದೇ ನಾಯಕರ ಹೆಸರಿನಲ್ಲಿ ಮತ ಕೇಳುವುದಿಲ್ಲ ಎಂದರು.

ಎಲ್ಲ ಬಂಟ ಸಮುದಾಯದ ಮತಗಳು ನನ್ನದಾಗುವುದಿಲ್ಲ. ಹಾಗೆ ಎಲ್ಲ ಬಿಲ್ಲವ ಸಮುದಾಯದ ಮತಗಳು ಅವರದಾಗುವುದಿಲ್ಲ. ನಾವು ಜಾತ್ಯತೀತ ಸಮಾಜದಲ್ಲಿ ಇದ್ದೇವೆ. ಜನರ ಅಭಿಪ್ರಾಯ ಮುಖ್ಯ. ಸಿಂಪ್ಲಿಸಿಟಿ ಚುನಾವಣೆ ವಿಷಯ ಆಗಬಾರದು. ಕೆಲಸ ಮುಖ್ಯ ಆದ್ಯತೆ ಆಗಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು