News Karnataka Kannada
Sunday, April 28 2024
ಉಡುಪಿ

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಪೂರಕ: ಕೃಷ್ಣಾಪುರ ಶ್ರೀ

Yakshagana helps in personality development of children: Krishnapura Sri
Photo Credit : News Kannada

ಉಡುಪಿ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಕಲೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಕಲಾರಂಗಗಳ ಸಹಯೋಗದೊಂದಿಗೆ ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾದ ಕಿಶೋರ ಯಕ್ಷಗಾನ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನ ನಮ್ಮ ಮಣ್ಣಿನ ಜಾನಪದ ಕಲೆ. ಈ ಕಲೆ ಸಂಗೀತ, ನೃತ್ಯ, ವೇಷ ಸೇರಿದಂತೆ ಎಲ್ಲ ರೀತಿಯ ಮನರಂಜನೆಯನ್ನು ಒಳ ಗೊಂಡಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಕೆ.ಅಶೋಕ್ ಕಾಮತ್, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಂಗಳೂರಿನ ವೈದ್ಯ ಡಾ.ಜೆ.ಎನ್.ಭಟ್, ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ.ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ.ಶೆಟ್ಟಿ, ಎಸ್.ವಿ.ಭಟ್, ಗೋಕುಲ್‌ದಾಸ್ ಪ್ರಭು ಉಪಸ್ಥಿತರಿದ್ದರು.

ಯಕ್ಷ ಶಿಕ್ಷಣ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಾರಾಯಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು