ಮಂಗಳೂರು: ಶಾಸಕ ಯು.ಟಿ ಖಾದರ್ ಸತತ ಐದನೇ ಬಾರಿ ಗೆಲುವು ದಾಖಲಿಸುವ ಮೂಲಕ ವಿಧಾನಸಭೆ ಪ್ರವೇಶ ಮಾಡಲಿದ್ದಾರೆ. 22,977 ಮತಗಳ ಅಂತರದಿಂದ ಗೆದ್ದು ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಎಸ್ಡಿಪಿಐ ಪಕ್ಷದ ರಿಯಾಜ್ ಫರಂಗಿಪೇಟೆ 15,029 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸತೀಶ್ ಕುಂಪಲ 60,429 ಮತಗಳನ್ನು ಪಡೆದಿದ್ದಾರೆ.
2018ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್ ನಿಂದ ಗೆದ್ದ ಏಕೈಕ ಶಾಸಕರಾಗಿದ್ದ ಖಾದರ್ ವಿಧಾನಸಭೆ ವಿಪಕ್ಷ ಉಪನಾಯಕರೂ ಆಗಿದ್ದರು.
ಐದನೇ ಬಾರಿಗೆ ವಿಧಾನಸಭೆ ಪ್ರವೇಶಕ್ಕೆ ಸಿದ್ದವಾಗಿರುವ ಸೋಲಿಲ್ಲದ ಸರದಾರ ಖಾದರ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.