ಶಿರಸಿ: ಅತಿವೇಗವಾಗಿ ಬೈಕ್ ಚಲಾಯಿಸಿ ಆಯತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಸುರಿಯಲ್ಲಿ ನಡೆದಿದೆ.
ಮೃತ ಯುವಕ ಹಾನಗಲ್ ಕೊಪ್ಪರಸಿಕೊಪ್ಪದ ಫಕ್ಕೀರೇಶ ಹನುಮಂತಪ್ಪ ವಾಲೀಕಾರ (22) ಎಂದು ಗುರುತಿಸಲಾಗಿದೆ.
ಪೊಲೀಸರಿಗೆ ದತ್ತು ಗಣೇಶ ನಾಯಕ ದೂರು ನೀಡಿದ್ದು, ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.