ಕಾರವಾರ: ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುವಂತೆ ಮೂರು ದಿನದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಜನರಿಗೆ ಇನ್ನಷ್ಟು ಹತ್ತಿರವಾಗಲು ತಿಂಗಳಿಗೆ ನಾಲ್ಕು ಬಾರಿ ತಹಸೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಪರಿಹರಿಸುವ ಸಂಬಂಧ ಆದೇಶ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು ತಿಂಗಳಿಗೆ ನಾಲ್ಕು ಬಾರಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕು. ಯಾವ್ಯಾವ ಜಿಲ್ಲಾಧಿಕಾರಿಗಳು ಯಾವ್ಯಾವ ತಾಲೂಕಿಗೆ ಭೇಟಿ ನೀಡಬೇಕು ಎಂಬ ಕುರಿತು ಪಟ್ಟಿ ತಯಾರಿಸಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಪ್ರತಿ ಮಂಗಳವಾರ ಕಚೇರಿಗೆ ಹೋಗುವಂತೆ ಸಚಿವ ಆರ್. ಅಶೋಕ್ ವೇಳಾಪಟ್ಟಿ ನಿಗದಿಪಡಿಸಿದ್ದಾರೆ. ಯಾವ ಜಿಲ್ಲಾಧಿಕಾರಿ ಯಾವ ದಿನಾಂಕ, ಯಾವ ತಾಲೂಕಿಗೆ ಹೋಗಬೇಕು ಎನ್ನುವುದನ್ನು ನಿರ್ಧರಿಸಿ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಮೇ. 31 ರಿಂದ ಆಗಸ್ಟ್ 16 ರವರೆಗಿನ ಟೈಂ ಟೇಬಲ್ ಸಿದ್ದವಾಗಿದೆ. ಇದರೊಂದಿಗೆ ಇನ್ಮುಮುಂದೆ ತಾಲೂಕು ಕಚೇರಿಗಳಲ್ಲಿಯೂ ಜನರಿಗೆ ಜಿಲ್ಲಾಧಿಕಾರಿ ಲಭ್ಯರಾಗಲಿದ್ದಾರೆ.