ಉತ್ತರಕನ್ನಡ

ಎಡಗೈಯಲ್ಲಿ ಊಟ ಮಾಡಿದಕ್ಕೆ ವಧುವನ್ನೇ ಬಿಟ್ಟು ಹೊರಟ ವರ!

ದಾಂಡೇಲಿ: ಕುಳಗಿ ರಸ್ತೆಯ ಈಶ್ವರ ದೇವಸ್ಥಾನದಲ್ಲಿ ಮದುವೆ ಮನೆಯಲ್ಲಿ ಎಡಗೈ ನಲ್ಲಿ ಊಟ ಮಾಡಿದಳೆಂಬ ಕಾರಣಕ್ಕೆ ವರನ ಕಡೆಯವರೆಲ್ಲ ಸೇರಿ ಮದುಮಗಳನ್ನೇ ಬಿಟ್ಟು ಹೊರಟ ಘಟನೆ  ಬುಧವಾರ ನಡೆದಿದೆ.

ಊಟದ ಸಮಯದಲ್ಲಿ ಮದುಮಗಳು ಎಡಗೈಯಲ್ಲಿ ಊಟ ಮಾಡುತ್ತಿರುವುದನ್ನು ಗಮನಿಸಿದ ಮದುಮಗ ತಕ್ಷಣವೇ ಮದುಮಗಳನ್ನು ಬಿಟ್ಟು ವಾಹನವನ್ನೇರಿ ಹೋಗಲು ಯತ್ನಿಸಿದ ವರ.

ಈ ಘಟನೆಯಿಂದ ಉದ್ರಿಕ್ತರಾದ ಸ್ಥಳೀಯರು ವರನ ಕಡೆಯವರನ್ನು ತಕ್ಷಣ ತಡೆದು ನಿಲ್ಲಿಸಿದರಲ್ಲದೆ, ವಧು-ವರರನ್ನು ಮಹಿಳಾ ಕೇಂದ್ರದ ಕಚೇರಿಗೆ ಕರೆದುಕೊಂಡು ಹೋಗಿ, ಕೌಟುಂಬಿಕ ಸಲಹೆ ನೀಡಿ, ಮುಚ್ಚಳಿಕೆ ಪತ್ರ ಬರೆದು ನವ ಜೋಡಿಯನ್ನು ಒಂದುಗೂಡಿಸಿದ್ದಾರೆ.

ತಾಲೂಕಿನ ವಿಕಲಚೇತನ ಯುವತಿ ಮತ್ತು ದಾಂಡೇಲಿಗೆ ಹತ್ತಿರದ ತಾಲೂಕಿನ ಯುವಕನ ಮದುವೆ ಬುಧವಾರ ಈಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿತ್ತು.

ಯುವಕ ಮಧ್ಯವರ್ತಿ ಮೂಲಕ ಯುವತಿಯನ್ನು ನೋಡಿ ಬಂದಿದ್ದ. ನೋಡಲು ಹೋದಾಗಲೇ ಯುವತಿಗೆ ಪೋಲಿಯೋ ಇರುವುದನ್ನು ಕುಟುಂಬಸ್ಥರು ತಿಳಿಸಿದ್ದರು. ಆದರೂ ಯುವಕ ಒಪ್ಪಿ ಮಾನವೀಯತೆ ಮೆರೆದಿದ್ದ. ಇದಾದ ಮೂರೇ ದಿನಕ್ಕೆ ಮಾ.9ರಂದು ಮದುವೆ ಶಾಸ್ತ್ರ ಮುಗಿಸಲಾಯಿತು.

ಊಟದ ಸಮಯದಲ್ಲಿ ಮದುಮಗಳು ಎಡಗೈಯಲ್ಲಿ ಊಟ ಮಾಡುತ್ತಿರುವುದನ್ನು ಗಮನಿಸಿದ ಮದುಮಗ ತಕ್ಷಣವೇ ಮದುಮಗಳನ್ನು ಬಿಟ್ಟು ವಾಹನವನ್ನೇರಿ ಹೋಗಲು ಯತ್ನಿಸಿದ. ಆಗ ಸ್ಥಳೀಯರು ಆತನನ್ನು ತಡೆದು ನಿಲ್ಲಿಸಿ ಪೊಲೀಸರು ಮತ್ತು ಮಹಿಳಾ ಕೇಂದ್ರಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ತಿಳಿ ಹೇಳಿ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.

Swathi MG

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

3 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

4 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

15 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

16 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

35 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

45 mins ago