ಸಿದ್ದಾಪುರ : ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ಭಾನುವಾರ ರಾತ್ರಿ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮೃತರನ್ನು ಘಟ್ಟದಳ್ಳ ನಿವಾಸಿ ಕರಿಯ(53) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಅಂಗಡಿಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದ ಕರಿಯ ಅವರ ಮೇಲೆ ಘಟ್ಟದಳ್ಳ ತಮಿಳು ಶಾಲೆಯ ಬಳಿ ಆನೆ ಹಠಾತ್ತನೆ ದಾಳಿ ನಡೆಸಿದೆ.
ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆ ಹಾವಳಿ ತಡೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ